Govt for Farmers

ಯುವ ಕೃಷಿಕರಿಗೆ ಸರ್ಕಾರದ ಯೋಜನೆಗಳು

ಅಗ್ರಿ ಕ್ಲಿನಿಕ್ಸ್  ಮತ್ತು ಕೃಷಿ-ವ್ಯಾಪಾರ ಕೇಂದ್ರಗಳ ಯೋಜನೆ

ಭಾರತ ಸರ್ಕಾರವು  ಕೃಷಿ-ಕ್ಲಿನಿಕ್  ಮತ್ತು ಕೃಷಿ-ವ್ಯಾಪಾರ ಕೇಂದ್ರಗಳ ಯೋಜನೆಯನ್ನು ಏಪ್ರಿಲ್ 2002 ರಲ್ಲಿ ಪರಿಚಯಿಸಿತು, ಈ ಯೋಜನೆಯು ತರಬೇತಿ ಮತ್ತು ಸಹಾಯಧನದ ಮೇಲೆ ಕೇಂದ್ರೀಕರಿಸುತ್ತದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅಗ್ರಿಕಲ್ಚರಲ್ ಎಕ್ಸ್‌ಟೆನ್ಶನ್ ಮ್ಯಾನೇಜ್‌ಮೆಂಟ್, ಕೃಷಿ ಪದವೀಧರರಿಗೆ ಕೃಷಿ ಸಂಬಂಧಿತ ಚಟುವಟಿಕೆಗಳ ಬಗ್ಗೆ ತರಬೇತಿಯನ್ನು ನೀಡಿ ಕೃಷಿ ಸಂಬಂದಿತ ವ್ಯಾಪಾರ ಘಟಕಗಳನ್ನು ಸ್ಥಾಪಿಸಲು ಸಹಾಯ ಮಾಡುತ್ತದೆ. ತರಬೇತಿ ಪಡೆದ ಅಭ್ಯರ್ಥಿಗಳಿಗೆ ಕೃಷಿ-ಉದ್ಯಮಗಳನ್ನು ಸ್ಥಾಪಿಸಲು ಸಾಲದ ಸೌಲಭ್ಯದ ಜೊತೆಗೆ ಕೆಲವು ಅಂಶಗಳನ್ನು ಪರಿಗಣಿಸಿ ಸಬ್ಸಿಡಿ/ಸಹಾಯಧನವನ್ನು ನೀಡಲಾಗುತ್ತದೆ. 

ಅಥವಾ

ಹಲವಾರು ಅಂಶಗಳನ್ನು ಪರಿಗಣಿಸಿ , ತರಬೇತಿ ಪಡೆದ ಅರ್ಜಿದಾರರಿಗೆ ಕೃಷಿ ಉದ್ಯಮಗಳನ್ನು ಪ್ರಾರಂಭಿಸಲು ಹಣಕಾಸಿನ ಸಹಾಯವನ್ನು ನೀಡಲಾಗುತ್ತದೆ.

ಗ್ರಾಮೀಣ ಯುವಕರಿಗೆ  ಕೌಶಲ್ಯ ತರಬೇತಿ (STRY)

ಗ್ರಾಮೀಣ ಯುವಕರಿಗೆ  ಕೌಶಲ್ಯ ತರಬೇತಿ (STRY) ಯೋಜನೆಯ ಉದ್ದೇಶವೇನೆಂದರೆ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಉದ್ಯೋಗವನ್ನು  ಹೆಚ್ಚಿಸಲು, ಕೃಷಿ ಮತ್ತು ಕೃಷಿಯೇತರ ಕಾರ್ಯಗಳಿಗೆ ಕೌಶಲ್ಯಪೂರ್ಣ ಕಾರ್ಮಿಕರ ಪಡೆಯನ್ನು  ಅಭಿವೃದ್ಧಿಪಡಿಸಲು , ಗ್ರಾಮೀಣ ಯುವಕರಿಗೆ ಕೃಷಿ ಹಾಗು  ಕೃಷಿಗೆ ಸಂಬಂಧಿತ ಇತರೆ  ಕೌಶಲ್ಯ ತರಬೇತಿಯನ್ನು  ನೀಡುವುದು. ಗ್ರಾಮೀಣಯುವಕರಿಗೆ ತರಬೇತಿಯನ್ನು ರಾಜ್ಯ / ಜಿಲ್ಲಾ ಮಟ್ಟದಲ್ಲಿ ಗುರುತಿಸಲಾದ ಯಾವುದೇ ತರಬೇತಿ ಸಂಸ್ಥೆಗಳ ಮೂಲಕ ನೀಡಲಾಗುತ್ತದೆ.

ಕೃಷಿ ಯಾಂತ್ರೀಕರಣದ ಉಪ ಮಿಷನ್ (SMAM)

ಈ ಯೋಜನೆಯಡಿಯಲ್ಲಿ, ಭಾರತ ಸರ್ಕಾರವು ವಿವಿಧ ರಾಜ್ಯಗಳಿಗೆ ಕೃಷಿ ಯಾಂತ್ರೀಕರಣಕ್ಕಾಗಿ ಅಂದರೆ ಕೃಷಿ ಯಂತ್ರ ಧಾರೆ ಕೇಂದ್ರಗಳ  ಸ್ಥಾಪನೆಗೆ, ಕೃಷಿ ಯಂತ್ರೋಪಕರಣಗಳ ಬ್ಯಾಂಕ್ ಸ್ಥಾಪಿಸಲು ಮತ್ತು ಅತ್ಯುತ್ತಮ ತಂತ್ರಜ್ಞಾನದ ಕೇಂದ್ರಗಳನ್ನು ಸ್ಥಾಪಿಸಲು ಹಣ ಬಿಡುಗಡೆ ಮಾಡುತ್ತದೆ. ಇದು ರೈತರ ಆದಾಯವನ್ನು ಹೆಚ್ಚಿಸಲು ಮತ್ತು ಕೃಷಿ ಆರ್ಥಿಕತೆಯ ಬೆಳವಣಿಗೆಗೆ ಸಹಾಯ ಮಾಡುತ್ತದೆ.

ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆ – ಕೃಷಿ ಮತ್ತು ಸಂಬಂಧಿತ ವಲಯಗಳ ಪುನರುಜ್ಜೀವನಕ್ಕಾಗಿ ಸಂಭಾವನೆಯ ವಿಧಾನಗಳು (RKVY-RAFTAAR)

ಈ ಯೋಜನೆಯು ದೇಶದಲ್ಲಿ ಕೃಷಿ ಮತ್ತು ಸಂಬಂಧಿತ ವಲಯಗಳಲ್ಲಿ ಮೂಲಸೌಕರ್ಯವನ್ನು ಬಲಪಡಿಸುವ ಮೂಲಕ ಕೃಷಿ ಉದ್ಯಾಮಶೀಲತೆ ಮತ್ತು ಕೃಷಿ ವ್ಯಾವಹಾರಿಕ ವ್ಯವಸ್ಥೆಯನ್ನು ನಿರ್ಮಿಸುವ ಗುರಿಯನ್ನು ಹೊಂದಿದೆ ಹಾಗು ಸಂಭಾವ್ಯ ಕೃಷಿಸ್ಟಾರ್ಟಪ್‌ಗಳಿಗೆ ಹಣಕಾಸಿನ ನೆರವು ಮತ್ತು ಉದ್ಯಮದ ಅಭಿರುದ್ದಿಗೆ ಸಹಕರಿಸುವುದು

ಪ್ರಮಾಣೀಕೃತ ಕೃಷಿ  ಸಲಹೆಗಾರ/ಪ್ರಮಾಣೀಕೃತ ಜಾನುವಾರು ಸಲಹೆಗಾರರ  ಕಾರ್ಯಕ್ರಮ

ಕೃಷಿ ವಿಸ್ತರಣಾ ಸಿಬ್ಬಂದಿಯನ್ನು ಬೆಳೆ/ಜಾನುವಾರು ತಜ್ಞರಾಗಿ ಅಭಿವೃದ್ಧಿಪಡಿಸಲು ಈ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ. ಇದು ಮೂಲಭೂತ ವಿಷಯಗಳೊಂದಿಗೆ ಬೆಳೆ/ಜಾನುವಾರುಗಳಲ್ಲಿ ಹೊಸ ತಂತ್ರಜ್ಞಾನವನ್ನು ಒಳಗೊಂಡಿದೆ ಮತ್ತು 3 ತಿಂಗಳ MANAGE ಆನ್‌ಲೈನ್ ತರಬೇತಿ ಕಾರ್ಯಕ್ರಮವನ್ನು ನಡೆಸುತ್ತದೆ. 

ರೈತರು ಮತ್ತು ಮಹಿಳೆಯರಿಗಾಗಿ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳು

ಈ ಯೋಜನೆಯು ಭಾರತದಾದ್ಯಂತ  ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಇರುವ ಯುವಕರಿಗೆ ಅಲ್ಪಾವಧಿ ಮತ್ತು ದೀರ್ಘಾವಧಿಯ ಕಾರ್ಯಕ್ರಮದ ಮೂಲಕ ಉದ್ಯೋಗ ಕೌಶಲ್ಯಗಳನ್ನು ಒದಗಿಸುವ ಯೋಜನೆಯಾಗಿದೆ

ಈ ಯೋಜನೆಯು ಶಾಲೆಯಿಂದ ಹೊರಗುಳಿದವರಿಗೆ ಮತ್ತು ನಿರುದ್ಯೋಗಿ ಯುವಕರಿಗೆ ನಾವೀನ್ಯ ರೀತಿಯ ಕೌಶಲ್ಯವನ್ನು ಒದಗಿಸುತ್ತದೆ, ಮತ್ತು ಕಡಿಮೆ ಪ್ರಾತಿನಿಧ್ಯತೆ   ಹೊಂದಿರುವ ಗುಂಪುಗಳಿಗೆ ಕೌಶಲ್ಯ ಅಗತ್ಯಗಳನ್ನು ನೀಡುವ ವಿಶೇಷ ಯೋಜನೆಗಳನ್ನು ಒಳಗೊಂಡಿದೆ.

ಪ್ರಾಜೆಕ್ಟ್ ಆರ್ಯ (ಕೃಷಿಯಲ್ಲಿ ಯುವಕರನ್ನು ಆಕರ್ಷಿಸುವುದು ಮತ್ತು ಉಳಿಸಿಕೊಳ್ಳುವುದು)

ಪ್ರಾಜೆಕ್ಟ್ ARYA ಗುರಿಯು ಗ್ರಾಮೀಣ ಯುವಕರನ್ನು ವಿವಿಧ ಕೃಷಿ ಮತ್ತು ಸಂಬಂಧಿತ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮತ್ತು ಸಬಲೀಕರಣಗೊಳಿಸುವುದು. ಯೋಜನೆಯ ಗುರಿಗಳೇನೆಂದರೆ ಉದ್ಯೋಗಗಳನ್ನು ಸೃಷ್ಟಿಸುವುದು, ಸ್ಥಿರ ಆದಾಯವನ್ನು ಖಾತರಿಪಡಿಸುವುದು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಮತ್ತು ಸಂಬಂಧಿತ ಕೈಗಾರಿಕೆಗಳನ್ನು ಮುನ್ನಡೆಸುವುದು.

Recent Posts

ಸೆಲ್ ಜೆಲ್: ಆಧುನಿಕ ಕೃಷಿಗಾಗಿ ನೀರಿನ ಉತ್ತಮ ಸ್ಥಿತಿಯನ್ನು ರೂಪಿಸುವ ಕ್ರಾಂತಿಕಾರಿ ಉತ್ಪನ್ನ

ಕೃಷಿಯಲ್ಲಿ, ದಕ್ಷತೆ ಮತ್ತು ಉತ್ಪಾದಕತೆ ಯಾವಾಗಲೂ ಮುಖ್ಯವಾಗಿರುತ್ತದೆ. ಈಗ ನಾವು ನಿಮಗೆ ನಿಮ್ಮ ನೀರಿನ ಸ್ಥಿತಿ, ನಿಮ್ಮ ಸಸ್ಯ ಸಂರಕ್ಷಣಾ ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಪರಿಣಾಮಕಾರಿತ್ವವನ್ನು ಹೆಚ್ಚಿಸುವ…

January 28, 2025

ಎಕ್ಸ್‌ಸ್ಕೇಲೆಂಟ್ : ಡ್ರಿಪ್ ಕ್ಲೀನಿಂಗ್ ಕಾರ್ಯವಿಧಾನದ ಮೂಲಕ ಬೆಳೆಗಳಿಗೆ ಸುರಕ್ಷಿತ ಪರಿಹಾರಗಳು

ಇತ್ತೀಚಿನ ಆಧುನಿಕ ಕೃಷಿಯಲ್ಲಿ ಸಮರ್ಥ ನೀರಿನ ನಿರ್ವಹಣೆ ಮಾಡುವುದು ನಿರ್ಣಾಯಕವಾಗಿದೆ ಮತ್ತು ಹನಿ ನೀರಾವರಿ ಪದ್ದತಿಯು  ನೇರವಾಗಿ ಬೇರುಗಳ ವಲಯವನ್ನು ಗುರಿಯಾಗಿಸಿಕೊಂಡು ಸಸ್ಯಗಳಿಗೆ ನೀರನ್ನು ತಲುಪಿಸುವ ವಿಧಾನವನ್ನು…

January 28, 2025

ಬಯೋಕ್ಯುಲಮ್ AW: ಬೆಳೆ ಸುಸ್ಥಿರತೆಗಾಗಿ ಬಳಸಲು ಸಿದ್ಧವಾಗಿರುವ ಡಿಕಂಪೋಸರ್

ಸುಸ್ಥಿರ ಕೃಷಿ ಪದ್ದತಿಯಲ್ಲಿ ಸರಳವಾದ ಆದರೆ ಆಳವಾದ ವಿಷಯವೇನೆಂದರೆ ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸುವುದು. ಸಾವಯವ ಕೃಷಿ ತ್ಯಾಜ್ಯವು ನಮಗೆ ಹೊರೆಯಾಗಿರದೆ ಮಣ್ಣನ್ನು ಸಮೃದ್ಧಗೊಳಿಸುವ, ಸಸ್ಯಗಳನ್ನು ಪೋಷಿಸುವ ಮತ್ತು…

January 28, 2025

ಎಪಿಸೆಲ್: ಸುಸ್ಥಿರ ಕೃಷಿಗಾಗಿ ನಿಮ್ಮ ಬೆಳೆಗಳ ಸಂಪೂರ್ಣ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ

ಇತ್ತೀಚೆಗೆ ಬದಲಾಗುತ್ತಿರುವ ಕೃಷಿ ಭೂದೃಶ್ಯದ ಕಾರಣವಾಗಿ, ಸಮರ್ಥನೀಯ ಮತ್ತು ಸಮರ್ಥ ಕೃಷಿ ವಿಧಾನಗಳನ್ನು ಕಂಡುಹಿಡಿಯುವುದು ನಿರ್ಣಾಯಕವಾಗಿದೆ. ಅದಕ್ಕಾಗಿಯೇ ಪರಿಚಯಿಸುತ್ತಿದ್ದೇವೆ, ಎಪಿಸೆಲ್! ಎಕ್ಸೆಲ್ ಇಂಡಸ್ಟ್ರೀಸ್‌ ರವರ ಈ ನವೀನ…

January 28, 2025

ಸೆಲ್ ಜೆಲ್‌ನೊಂದಿಗೆ ಕೃಷಿ ದಕ್ಷತೆಯನ್ನು ಹೆಚ್ಚಿಸುವುದು: ನೀರಿನ ಕಂಡೀಷನಿಂಗ್ ಮತ್ತು pH ಸಮತೋಲನ ಮಾಡಲು ಸಲಹೆಗಳು

ನೀರು ಕೃಷಿಯಲ್ಲಿ ಮೂಲಭೂತ ಸಂಪನ್ಮೂಲವಾಗಿದ್ದು, ಬೆಳೆಗಳ ವೃದ್ಧಿಗಾಗಿ ಅಗತ್ಯ ಪೋಷಕಾಂಶಗಳ ಮತ್ತು ಬೆಳೆ ರಕ್ಷಣೆಗೆ ಅಗತ್ಯವಾದ ರಾಸಾಯನಿಕಗಳನ್ನು ಸಾಗಿಸುವಲ್ಲಿ ವಾಹಕವಾಗಿ ಕಾರ್ಯನಿರ್ವಹಿಸುತ್ತದೆ . ಆದಾಗ್ಯೂ, ಕಳೆನಾಶಕಗಳು, ಕೀಟನಾಶಕಗಳು,…

January 28, 2025

ಎಕ್ಸ್‌ಸ್ಕೇಲೆಂಟ್: ಹನಿ ನೀರಾವರಿ ವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ಸುರಕ್ಷಿತ ಮತ್ತು ಪರಿಣಾಮಕಾರಿ ಪರಿಹಾರ

ಹನಿ ನೀರಾವರಿ ವ್ಯವಸ್ಥೆ ಆಧುನಿಕ ಕೃಷಿಯ ಅತ್ಯಗತ್ಯ ಅಂಶವಾಗಿದೆ. ಇದು ಸಸ್ಯಗಳ ಬೇರುಗಳಿಗೆ ನೇರವಾಗಿ ನೀರನ್ನು ತಲುಪಿಸುವ ಅತ್ಯಂತ ಪರಿಣಾಮಕಾರಿ ವಿಧಾನವಾಗಿದೆ. ಈ ವಿಧಾನವು ನೀರನ್ನು ಸಂರಕ್ಷಿಸುವುದು…

January 28, 2025