Govt for Farmers

ಸಾಗರ ಪರಿಕ್ರಮ ಹಂತ III – ಮೀನುಗಾರಿಕಾ ವಲಯವನ್ನು ಉತ್ತೇಜಿಸಲು, ಕರಾವಳಿ ಸಮುದಾಯಗಳ ಏಳಿಗೆಗಾಗಿ ಸರ್ಕಾರದ ಪ್ರಯತ್ನಗಳನ್ನು ಸಾರುತ್ತದೆ.

ಸಾಗರ ಪರಿಕ್ರಮ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರದ ಮೀನುಗಾರಿಕೆ ಇಲಾಖೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದದಿಂದ, ಆಜಾದಿ ಕಾ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅನುಷ್ಠಾನ ಮಾಡಲಾಗಿದ್ದು, ಸದರಿಯು ಸ್ವಾತಂತ್ರ್ಯದ 75 ನೇ ವರ್ಷವನ್ನು ಸ್ಮರಿಸುತ್ತದೆ. ಪ್ರಸ್ತುತ ಕಾರ್ಯಕ್ರಮವು ಕರಾವಳಿ ಸಮುದಾಯಗಳ ಭಾವನೆಗಳ ಬಗ್ಗೆ ತಿಳಿದುಕೊಳ್ಳಲು ಮತ್ತು ಕರಾವಳಿ ಪ್ರದೇಶದ ಸಂಪತ್ತಿನ ಬಗ್ಗೆ ಅರಿತುಕೊಳ್ಳುವ ನಿಟ್ಟಿನಲ್ಲಿದೆ. ಸಾಗರ ಪರಿಕ್ರಮದ ಮೂರನೇ ಹಂತವು ಪ್ರಸ್ತುತ ಸಾಲಿನ ಫೆಬ್ರವರಿ 19 ರಿಂದ 21 ರವರೆಗೆ ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ನಡೆದಿದ್ದು, ಮುಂಬೈನ ಸಾಸನ್ ಡಾಕ್‌ನಲ್ಲಿ ಮುಕ್ತಾಯವಾಯಿತು.

ಅವಲೋಕನ

ಕಾರ್ಯಕ್ರಮದಲ್ಲಿ ಕೇಂದ್ರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವರಾದ ಪುರಶೋತ್ತಮ್ ರೂಪಾಲಾರವರು ಕರಾವಳಿ ಸಮುದಾಯಗಳೊಂದಿಗೆ ಸಂವಾದ ನಡೆಸಿ, ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಜೊತೆಗೆ ಮೀನುಗಾರಿಕಾ ವಲಯದಲ್ಲಿ ಇಪ್ಪತ್ತು ಸಾವಿರ ಕೋಟಿ ಹೂಡಿಕೆ ಮಾಡುವ ಮುಂದಾಲೋಚನೆಯೊಂದಿಗೆ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯನ್ನು ಆಯೋಜಿಸಲಾಗಿದ್ದು, ಜೊತೆಗೆ ಮೀನುಗಾರಿಕಾ ವಲಯದ ಕಲ್ಯಾಣಕ್ಕಾಗಿ ಸರ್ಕಾರ ಮಾಡಿರುವ ವಿವಿಧ ನಿಬಂಧನೆಗಳ ಕುರಿತು ಚರ್ಚಿಸಲಾಯಿತು. ಮೀನುಗಾರಿಕೆ ಮೂಲಭೂತಸೌಕರ್ಯವನ್ನು ಪ್ರಸ್ತುತ ಯೋಜನೆಯ ಮುಖಾಂತರ ಬಲಪಡಿಸಲಾಗಿದೆ ಹಾಗೂ ಸಹಕಾರಿ ಕ್ಷೇತ್ರಕ್ಕೆ ಪ್ರತ್ಯೇಕವಾಗಿ ಸ್ವಾತಂತ್ರವನ್ನು ನೀಡಿ, ಸದರಿಯವರ ಮೂಲಕ ಮೀನುಗಾರಿಕೆ ಕ್ಷೇತ್ರವನ್ನು ಬಲಪಡಿಸಲು ಸ್ಥಾನಮಾನವನ್ನು ನೀಡಲಾಗಿದೆ. ಮೀನುಗಾರರೂ ಕೂಡ ಉಳಿದ ರೈತರ ಹಾಗೆಯೇ ಕಿಸಾನ್ ಕ್ರೆಡಿಟ್ ಕಾರ್ಡ್‌ನ ಪ್ರಯೋಜನವನ್ನು ಪಡೆದುಕೊಂಡು, ಕರಾವಳಿಯ ಸಮುದಾಯದಲ್ಲಿ ಆರ್ಥಿಕ ಸಬಲತೆಯನ್ನು ಸಾಧಿಸಲು ಉಪಯುಕ್ತವಾಗಿದೆ.

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಮತ್ತು ಕಿಸಾನ್ ಕ್ರೆಡಿಟ್ ಕಾರ್ಡ್‌ಗೆ ಸಂಬಂಧಿಸಿದ ಪ್ರಮಾಣಪತ್ರಗಳು/ಮಂಜೂರುಗಳನ್ನು ಪ್ರಗತಿಪರ ಮೀನುಗಾರರಿಗೆ, ಪ್ರತ್ಯೇಕವಾಗಿ ಕರಾವಳಿ ಮೀನುಗಾರರು, ಯುವ ಮೀನುಗಾರಿಕಾ ಉದ್ಯಮಿಗಳಿಗೆ ನೀಡಲಾಯಿತು. ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ, ಕಿಸಾನ್ ಕ್ರೆಡಿಟ್ ಕಾರ್ಡ್, ಮೀನುಗಾರಿಕೆ ಮೂಲಭೂತಸೌಕರ್ಯ ನಿಧಿ, ರಾಜ್ಯ ಯೋಜನೆಗಳು, ಇ-ಶ್ರಮ ಇತ್ಯಾದಿಗಳ ಬಗ್ಗೆ ಮಾಹಿತಿ ಒದಗಿಸಲಾಯಿತು. ಸಾಗರ ಪರಿಕ್ರಮ III ನೇ ಹಂತದಲ್ಲಿ ಮೀನುಗಾರರಿಗೆ ತಮ್ಮಲ್ಲಿ ಕಂಡುಬರುವ ಕುಂದುಕೊರತೆ ಮತ್ತು ಆತಂಕಗಳನ್ನು ವ್ಯಕ್ತಪಡಿಸಲು ವೇದಿಕೆಯನ್ನು ಹಂಚಿಕೊಳ್ಲಲು ಅನುಮತಿ ನೀಡಲಾಯಿತು. ಭೇಟಿ ನೀಡಿದ ಪ್ರತಿಯೊಂದು ಸ್ಥಳದಲ್ಲಿ ಕರಾವಳಿ ಸಮುದಾಯಗಳು ಸಾಂಪ್ರದಾಯಿಕ ಜಾನಪದ ಪ್ರದರ್ಶನಗಳೊಂದಿಗೆ ಸ್ವಾಗತಿಸಿದರು. ಸುಮಾರು 12,500 ಮೀನುಗಾರರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.

ಪ್ರಮುಖ ಮಾಹಿತಿ

  • ಕೇಂದ್ರ ಸರ್ಕಾರವು, 75 ವರ್ಷಗಳ ಸ್ವಾತಂತ್ರ್ಯವನ್ನು ಸಂದರ್ಭವಾಗಿ ‘ಸಾಗರ ಪರಿಕ್ರಮ’ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲಾಯಿತು.
  • ಪ್ರಸ್ತುತ ಕಾರ್ಯಕ್ರಮವು ಪ್ರತ್ಯೇಕವಾಗಿ ಸಮುದ್ರ ಮೀನುಗಾರಿಕೆ ಸಂಪನ್ಮೂಲ ಹಾಗೂ ಸಮುದ್ರ ಪರಿಸರ ವ್ಯವಸ್ಥೆಗಳ ರಕ್ಷಣೆಯ ನಡುವಿನ ಸುಸ್ಥಿರ ಸಮತೋಲನವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ.
  • ಮೀನುಗಾರಿಕಾ ಕ್ಷೇತ್ರಕ್ಕೆ ಪ್ರತ್ಯೇಕ ಸ್ಥಾನಮಾನವನ್ನು ನೀಡಲಾಗಿದೆ ಮತ್ತು ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯನ್ನು ಆರಂಭಿಸಲು 20,000 ಕೋಟಿ ರೂಪಾಯಿಗಳ ಅನುದಾನದೊಂದಿಗೆ ಅನುಷ್ಠಾನಮಾಡಲಾಗಿದೆ.
  • ಮೀನುಗಾರರೂ ಕೂಡ ಉಳಿದ ರೈತರ ಹಾಗೆಯೇ ಕಿಸಾನ್ ಕ್ರೆಡಿಟ್ ಕಾರ್ಡ್‌ನ ಪ್ರಯೋಜನವನ್ನು ಪಡೆದುಕೊಂಡು

ತೀರ್ಮಾನ

ಸಾಗರ ಪರಿಕ್ರಮ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರದ ಮೀನುಗಾರಿಕೆ ಇಲಾಖೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದದಿಂದ ಅನುಷ್ಠಾನ ಮಾಡಲಾಗಿದ್ದು, ಸದರಿ ಯೋಜನೆಯು ದೇಶದ ಆಹಾರ ಭದ್ರತೆಯನ್ನು ಖಾತ್ರಿಪಡಿಸುವ ಉದ್ದೇಶಕ್ಕಾಗಿ ಸಮುದ್ರ ಮೀನುಗಾರಿಕೆ ಸಂಪನ್ಮೂಲಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿದ ಪ್ರಮುಖ ಉಪಕ್ರಮವಾಗಿದ್ದು, ಕರಾವಳಿಯಲ್ಲಿ ವಾಸಿಸುವ ಮೀನುಗಾರ ಸಮುದಾಯಗಳ ಜೀವನ ಸಾಗಿಸುವಲ್ಲಿ ಒಳಿತು ಸೃಷ್ಟಿಸಿದೆ. ಪ್ರಸ್ತುತ ಮುಕ್ತಾಯಗೊಂಡ ಸಾಗರ ಪರಿಕ್ರಮದ ಮೂರನೇ ಹಂತದಲ್ಲಿ ಸಾವಿರಾರು ಮೀನುಗಾರರು, ಉದ್ಯಮಿದಾರರು, ಪಾಲುದಾರರು, ವೃತ್ತಿಪರರು, ಅಧಿಕಾರಿಗಳು ಮತ್ತು ರಾಷ್ಟ್ರದಾದ್ಯಂತ ವಿಜ್ಞಾನಿಗಳು ಭಾಗವಹಿಸಿದ್ದರು. ಇವರು ಸರ್ಕಾರಿ ಅಧಿಕಾರಿಗಳು ಮತ್ತು ಗಣ್ಯರೊಂದಿಗೆ ಸಂವಾದ ನಡೆಸಿ, ಅವರ ಸಮಸ್ಯೆಗಳನ್ನು ಚರ್ಚಿಸಿದರು. ಸಾಗರ ಪರಿಕ್ರಮ ಕಾರ್ಯಕ್ರಮದ ಯಶಸ್ಸು ಸಮುದ್ರ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆಯಲ್ಲಿ ಸಮುದಾಯದ ಸಹಭಾಗಿತ್ವದ ಪ್ರಾಮುಖ್ಯತೆ ಮತ್ತು ಅವುಗಳ ಸಂರಕ್ಷಣೆಗೆ ನಿರಂತರ ಪ್ರಯತ್ನಗಳ ಅಗತ್ಯವನ್ನು ತಿಳಿಸಿ ಹೇಳಿದೆ. 

 

Recent Posts

ಸೆಲ್ ಜೆಲ್: ಆಧುನಿಕ ಕೃಷಿಗಾಗಿ ನೀರಿನ ಉತ್ತಮ ಸ್ಥಿತಿಯನ್ನು ರೂಪಿಸುವ ಕ್ರಾಂತಿಕಾರಿ ಉತ್ಪನ್ನ

ಕೃಷಿಯಲ್ಲಿ, ದಕ್ಷತೆ ಮತ್ತು ಉತ್ಪಾದಕತೆ ಯಾವಾಗಲೂ ಮುಖ್ಯವಾಗಿರುತ್ತದೆ. ಈಗ ನಾವು ನಿಮಗೆ ನಿಮ್ಮ ನೀರಿನ ಸ್ಥಿತಿ, ನಿಮ್ಮ ಸಸ್ಯ ಸಂರಕ್ಷಣಾ ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಪರಿಣಾಮಕಾರಿತ್ವವನ್ನು ಹೆಚ್ಚಿಸುವ…

January 28, 2025

ಎಕ್ಸ್‌ಸ್ಕೇಲೆಂಟ್ : ಡ್ರಿಪ್ ಕ್ಲೀನಿಂಗ್ ಕಾರ್ಯವಿಧಾನದ ಮೂಲಕ ಬೆಳೆಗಳಿಗೆ ಸುರಕ್ಷಿತ ಪರಿಹಾರಗಳು

ಇತ್ತೀಚಿನ ಆಧುನಿಕ ಕೃಷಿಯಲ್ಲಿ ಸಮರ್ಥ ನೀರಿನ ನಿರ್ವಹಣೆ ಮಾಡುವುದು ನಿರ್ಣಾಯಕವಾಗಿದೆ ಮತ್ತು ಹನಿ ನೀರಾವರಿ ಪದ್ದತಿಯು  ನೇರವಾಗಿ ಬೇರುಗಳ ವಲಯವನ್ನು ಗುರಿಯಾಗಿಸಿಕೊಂಡು ಸಸ್ಯಗಳಿಗೆ ನೀರನ್ನು ತಲುಪಿಸುವ ವಿಧಾನವನ್ನು…

January 28, 2025

ಬಯೋಕ್ಯುಲಮ್ AW: ಬೆಳೆ ಸುಸ್ಥಿರತೆಗಾಗಿ ಬಳಸಲು ಸಿದ್ಧವಾಗಿರುವ ಡಿಕಂಪೋಸರ್

ಸುಸ್ಥಿರ ಕೃಷಿ ಪದ್ದತಿಯಲ್ಲಿ ಸರಳವಾದ ಆದರೆ ಆಳವಾದ ವಿಷಯವೇನೆಂದರೆ ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸುವುದು. ಸಾವಯವ ಕೃಷಿ ತ್ಯಾಜ್ಯವು ನಮಗೆ ಹೊರೆಯಾಗಿರದೆ ಮಣ್ಣನ್ನು ಸಮೃದ್ಧಗೊಳಿಸುವ, ಸಸ್ಯಗಳನ್ನು ಪೋಷಿಸುವ ಮತ್ತು…

January 28, 2025

ಎಪಿಸೆಲ್: ಸುಸ್ಥಿರ ಕೃಷಿಗಾಗಿ ನಿಮ್ಮ ಬೆಳೆಗಳ ಸಂಪೂರ್ಣ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ

ಇತ್ತೀಚೆಗೆ ಬದಲಾಗುತ್ತಿರುವ ಕೃಷಿ ಭೂದೃಶ್ಯದ ಕಾರಣವಾಗಿ, ಸಮರ್ಥನೀಯ ಮತ್ತು ಸಮರ್ಥ ಕೃಷಿ ವಿಧಾನಗಳನ್ನು ಕಂಡುಹಿಡಿಯುವುದು ನಿರ್ಣಾಯಕವಾಗಿದೆ. ಅದಕ್ಕಾಗಿಯೇ ಪರಿಚಯಿಸುತ್ತಿದ್ದೇವೆ, ಎಪಿಸೆಲ್! ಎಕ್ಸೆಲ್ ಇಂಡಸ್ಟ್ರೀಸ್‌ ರವರ ಈ ನವೀನ…

January 28, 2025

ಸೆಲ್ ಜೆಲ್‌ನೊಂದಿಗೆ ಕೃಷಿ ದಕ್ಷತೆಯನ್ನು ಹೆಚ್ಚಿಸುವುದು: ನೀರಿನ ಕಂಡೀಷನಿಂಗ್ ಮತ್ತು pH ಸಮತೋಲನ ಮಾಡಲು ಸಲಹೆಗಳು

ನೀರು ಕೃಷಿಯಲ್ಲಿ ಮೂಲಭೂತ ಸಂಪನ್ಮೂಲವಾಗಿದ್ದು, ಬೆಳೆಗಳ ವೃದ್ಧಿಗಾಗಿ ಅಗತ್ಯ ಪೋಷಕಾಂಶಗಳ ಮತ್ತು ಬೆಳೆ ರಕ್ಷಣೆಗೆ ಅಗತ್ಯವಾದ ರಾಸಾಯನಿಕಗಳನ್ನು ಸಾಗಿಸುವಲ್ಲಿ ವಾಹಕವಾಗಿ ಕಾರ್ಯನಿರ್ವಹಿಸುತ್ತದೆ . ಆದಾಗ್ಯೂ, ಕಳೆನಾಶಕಗಳು, ಕೀಟನಾಶಕಗಳು,…

January 28, 2025

ಎಕ್ಸ್‌ಸ್ಕೇಲೆಂಟ್: ಹನಿ ನೀರಾವರಿ ವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ಸುರಕ್ಷಿತ ಮತ್ತು ಪರಿಣಾಮಕಾರಿ ಪರಿಹಾರ

ಹನಿ ನೀರಾವರಿ ವ್ಯವಸ್ಥೆ ಆಧುನಿಕ ಕೃಷಿಯ ಅತ್ಯಗತ್ಯ ಅಂಶವಾಗಿದೆ. ಇದು ಸಸ್ಯಗಳ ಬೇರುಗಳಿಗೆ ನೇರವಾಗಿ ನೀರನ್ನು ತಲುಪಿಸುವ ಅತ್ಯಂತ ಪರಿಣಾಮಕಾರಿ ವಿಧಾನವಾಗಿದೆ. ಈ ವಿಧಾನವು ನೀರನ್ನು ಸಂರಕ್ಷಿಸುವುದು…

January 28, 2025