News

ರೈತರಿಗೆ ಅನುಮೋದನೆ ಪ್ರಕ್ರಿಯೆಯನ್ನು ಸರಳ ಮಾಡುವ ನಿಟ್ಟಿನಲ್ಲಿ NHB: ತ್ವರಿತ ಅನುಮೋದನೆ, ಡಿಜಿಟಲ್ ಹಾಗೂ ಕನಿಷ್ಠ ದಾಖಲಾತಿಗಳೊಂದಿಗೆ ಸಾಧ್ಯ.

ಪರಿಚಯ

         ರಾಷ್ಟ್ರೀಯ ತೋಟಗಾರಿಕಾ ಮಂಡಳಿಯು (NHB), ತೋಟಗಾರಿಕಾ ಯೋಜನೆಗಳಿಗೆ ತ್ವರಿತ ಹಾಗೂ ಸರಳ ಅನುಮೋದನೆ ಪ್ರಕ್ರಿಯೆಯನ್ನು ರೈತರಿಗೆ ಅನುವು ಮಾಡುವಂತೆ ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಗಿತ್ತು. ಸಂಪೂರ್ಣವಾಗಿ ಡಿಜಿಟಲ್ ಮಾಡಿ ಕೇವಲ ಅಗತ್ಯವಿರುವ ಕನಿಷ್ಠ ದಾಖಲಾತಿಗಳೊಂದಿಗೆ ಈಗ ಒಂದೇ ಸರಳ ವಿಧಾನವನ್ನು ಪಾಲಿಸಿದರೆ  ಸದರಿ ಪ್ರಕ್ರಿಯೆಯು ಪೂರ್ಣವಾಗುತ್ತದೆ. ಈ ವಿನ್ಯಾಸವು ಜನವರಿ 1, 2023 ರಿಂದ ಜಾರಿಗೆ ಬರಲಿದ್ದು, ಸದರಿ ವ್ಯವಸ್ಥೆಯು ಪರಿಣಾಮಕಾರಿಯಾಗುವ ಗುರಿಯನ್ನು ಹೊಂದಿದೆ, ಜೊತೆಗೆ ರೈತರಿಗೆ ಸರಳ ವ್ಯಾಪಾರ ಮಾಡಲು ಪ್ರೇರೇಪಿಸಿದೆ.

ಅವಲೋಕನ

ನವದೆಹಲಿಯಲ್ಲಿ ಜರುಗಿದ ಸದರಿ ಸಭೆಯಲ್ಲಿ ತೋಟಗಾರಿಕಾ ಯೋಜನೆಗಳ  ಪ್ರಯೋಜನವನ್ನು ಪಡೆಯುವ ನಿಟ್ಟಿನಲ್ಲಿ, ರೈತರು ಈ ಮೊದಲು ಅನುಸರಿಸುತ್ತಿರುವ   ಪ್ರಕ್ರಿಯೆಯು  ದೀರ್ಘಕಾಲಿಕ ಹಾಗೂ ಕಠಿಣವಾಗಿರುವುದರಿಂದ, ರಾಷ್ಟ್ರೀಯ ತೋಟಗಾರಿಕಾ ಮಂಡಳಿಯು (NHB) ರೈತರಿಗೆ ಸರಳ ಅನುಮೋದನೆ ಪ್ರಕ್ರಿಯೆಗೆ ಸೂಕ್ತವಾದ ಮಾರ್ಗವನ್ನು ನೀಡುವಂತೆ ಚರ್ಚಿಸಲಾಯಿತು. ಈ ಸಂಬಂಧ ಅನುಮೋದನೆ ಪ್ರಕ್ರಿಯೆಯನ್ನು ಸರಳೀಕರಣಗೊಳಿಸುವುದು, ಸಂಪೂರ್ಣ ಡಿಜಿಟಲ್ ಮಾಡುವುದು, ಕನಿಷ್ಠ ದಾಖಲೆ ಪಡೆದುಕೊಳ್ಳುವುದರಿಂದ ರೈತರಿಗೆ  ಸುಲಭವಾಗಿ ವ್ಯಾಪಾರಮಾಡಲು ಹುರಿದುಂಬಿಸಿದೆ. ಅದಲ್ಲದೆ ಸ್ವಚ್ಚ ಸಸಿ ಕಾರ್ಯಕ್ರಮ ಎಂಬ ಹೊಸ ವಿನ್ಯಾಸದ ಕುರಿತು ಚರ್ಚಿಸಲಾಗಿದ್ದು, ಈ ಸಂಬಂಧ ಏಷ್ಯನ್ ಅಭಿವೃದ್ಧಿ ಬ್ಯಾಂಕ್ ನೆರವಿನಿಂದ 2100 ಕೋಟಿ ರೂಪಾಯಿಗಳ ಹೂಡಿಕೆಯಿಂದ ರೈತರಿಗೆ ನಾಟಿ ಸಸಿಗಳ ಲಭ್ಯತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಸಾವಯವ ಮತ್ತು ನೈಸರ್ಗಿಕ ಕೃಷಿಯನ್ನು ಅಳವಡಿಸಿಕೊಳ್ಳುವಂತೆ  ರಾಷ್ಟ್ರೀಯ ತೋಟಗಾರಿಕಾ ಮಂಡಳಿಯು ಪ್ರಯತ್ನಿಸಲಿದೆ.  ಈ ಹೊಸ ವಿನ್ಯಾಸವು ಜನವರಿ 1, 2023 ರಿಂದ ಜಾರಿಗೆ ಬರಲಿದೆ.

ಸದರಿ ನಿರ್ಧಾರದಿಂದ ಕನಿಷ್ಠ ದಾಖಲಾತಿಯೊಂದಿಗೆ, ಸಂಪೂರ್ಣ ಡಿಜಿಟಲ್ ಆಗಿ, ಒಂದೇ ಹಂತದಲ್ಲಿ ಅನುಮೋದನೆ ಸಾಧ್ಯವಾಗಲಿದ್ದು, ರೈತರಿಗೆ ಅನುಕೂಲವಾಗಿದೆ. ಇದರಿಂದ ಇನ್ನು ಹೆಚ್ಚಿನ ಯೋಜನೆಗಳಿಗೆ ನಾಂದಿಯಾಗಿ ಹೊರಹೊಮ್ಮಲ್ಲಿದ್ದು, ಇದರ ಪ್ರಕ್ರಿಯೆಯು ಪಾರದರ್ಶಕವಾಗಿದ್ದು ಹೆಚ್ಚು ಪರಿಣಾಮಕಾರಿಯಾಗಿದೆ. ಇದರಿಂದ ರೈತ ಸಮುದಾಯಕ್ಕೆ ಹೆಚ್ಚಿನ ವ್ಯಾಪಾರವನ್ನು ಕೈಗೊಳ್ಲಲು ಉತ್ತೇಜನ ನೀಡಿದೆ. NHBಯ ಉಪ-ಯೋಜನೆಯಾಗಿರುವ ಸ್ವಚ್ಚ ಸಸಿ ಕಾರ್ಯಕ್ರಮವು ರೈತರಿಗೆ ಆರೋಗ್ಯಕರ ಕಸಿ ಲಭ್ಯತೆಯ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಗುಣಮಟ್ಟದ ಕಸಿಯನ್ನು ಒದಗಿಸುವ ಮೂಲಕ ರೈತರಿಗೆ ಅನುಕೂಲವಾಗಿದೆ. ಜೊತೆಗೆ ಸಾವಯವ ಮತ್ತು ನೈಸರ್ಗಿಕ ಕೃಷಿಯನ್ನು ಅಳವಡಿಸುವ ರೈತರಿಗೆ ಪ್ರೋತ್ಸಾಹವನ್ನು ನೀಡಿ, ಇದನ್ನು ಅಳವಡಿಸಿರುವ ರೈತರಿಗೆ ಪ್ರಯೋಜನಕಾರಿಯಾಗಿದೆ.

ಪ್ರಮುಖ ಮಾಹಿತಿ:

  • ರಾಷ್ಟ್ರೀಯ ತೋಟಗಾರಿಕಾ ಮಂಡಳಿಯ (NHB) 32ನೇ ಸಭೆಯು ನವದೆಹಲಿಯಲ್ಲಿ ನಡೆದಿದೆ.
  • ತೋಟಗಾರಿಕೆ ಯೋಜನೆಗಳಿಗೆ ಅನುಮೋದನೆ ಪ್ರಕ್ರಿಯೆಯನ್ನು ರಾಷ್ಟ್ರೀಯ ತೋಟಗಾರಿಕಾ ಮಂಡಳಿಯು ಸಂಪೂರ್ಣವಾಗಿ ಡಿಜಿಟಲ್ ಆಗಿ ಪರಿರ್ವತಿಸಿದ್ದು, ಕನಿಷ್ಠ ದಾಖಲಾತಿಯೊಂದಿಗೆ  ರೈತರಿಗೆ ಸರಳಗೊಳಿಸಿದೆ.
  • ಸದರಿ ನಿರ್ಧಾರದ ಪ್ರಮುಖ ಗುರಿ ರೈತರ ವ್ಯಾಪಾರವನ್ನು ಹೆಚ್ಚಿಸುವುದು ಹಾಗು ಸದರಿ ವ್ಯವಸ್ಥೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಪರಿರ್ವತಿಸುವುದಾಗಿದೆ.
  • ಆರೋಗ್ಯಕರವಾದ ಸಸಿಯನ್ನು ರೈತರಿಗೆ ಒದಗಿಸಬೇಕೆಂಬ ವಿಚಾರವನ್ನು ಸಭೆಯಲ್ಲಿ ಚರ್ಚಿಸಲಾಗಿದ್ದು, ನಿರ್ಧಾರದಂತೆ  ಏಷ್ಯನ್ ಅಭಿವೃದ್ಧಿ ಬ್ಯಾಂಕ್ (ADB)ಮೂಲಕ 2100 ಕೋಟಿ ರೂಪಾಯಿ  ಮಾತ್ರವನ್ನು ಹೂಡಿಕೆ ಮಾಡಲಾಗಿತ್ತು
  • ಸಾವಯವ ಮತ್ತು ನೈಸರ್ಗಿಕ ಕೃಷಿಯನ್ನು ಅಳವಡಿಸುವಂತೆ ರೈತರಿಗೆ ಪ್ರೋತ್ಸಾಹದಾಯಕವಾಗಿದೆ
  • ರಾಷ್ಟ್ರೀಯ ತೋಟಗಾರಿಕಾ ಮಂಡಳಿಯ ಅಡಿಯಲ್ಲಿರುವ ಕ್ಲಸ್ಟರ್ ಅಭಿವೃದ್ಧಿ ಕಾರ್ಯಕ್ರಮದ ಪ್ರಗತಿ ಪರಿಶೀಲಿಸಲಾಯಿತು ಹಾಗೂ ಅರ್ಜಿಗಳ ಅನುಮೋದನೆ ಪ್ರಕ್ರಿಯೆಯನ್ನು ಸರಳಗೊಳಿಸಲಾಯಿತು.
  • ಹಿಂದಿನ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಸದರಿ ಸಭೆಯಲ್ಲಿ ಅನುಮೋದಿಸಲಾಯಿತು

ತೀರ್ಮಾನ

ಈ ಹಿಂದೆ ನಡೆದ ರಾಷ್ಟ್ರೀಯ ತೋಟಗಾರಿಕಾ ಮಂಡಳಿಯ ಸಭೆಯು, ರೈತರಿಗೆ ತೋಟಗಾರಿಕೆ ಯೋಜನೆಗಳನ್ನು ಅನುಷ್ಠಾನ ಮಾಡುವಲ್ಲಿ ಸುಧಾರಣೆಯ ಕುರಿತು ಚರ್ಚಿಸಲಾಯಿತು. ಜನವರಿ 1, 2023 ರಿಂದ ಜಾರಿಗೆ ಬರಲಿರುವ ಸದರಿ ವಿನ್ಯಾಸವು ಅನುಮೋದನೆಯಲ್ಲಿ ಸರಳ ಮಾರ್ಗ ಹೊಂದಲಿದ್ದು, ಹೆಚ್ಚು ಪರಿಣಾಮಕಾರಿಯಾಗಲಿದೆ. ಮುಂದುವರಿದು, ಆರೋಗ್ಯವಾದ ಕಸಿಯನ್ನು ಒದಗಿಸುವಲ್ಲಿ ಹಾಗೆಯೇ  ಸಾವಯವ ಮತ್ತು ನೈಸರ್ಗಿಕ ಕೃಷಿಯನ್ನು ಅಳವಡಿಸುವಂತೆ ರೈತರಿಗೆ ಉಪಾಯಕಾರಿಯಾಗಲಿದೆ.  ಮುಂದುವರಿದು, ದೇಶದ ತೋಟಗಾರಿಕಾ ವಲಯದಲ್ಲಿ  ಪ್ರಗತಿ ಸಾಧಸುವಲ್ಲಿ ಲಾಭದಾಯಕವಾಗಿದೆ.

Recent Posts

ಸೆಲ್ ಜೆಲ್: ಆಧುನಿಕ ಕೃಷಿಗಾಗಿ ನೀರಿನ ಉತ್ತಮ ಸ್ಥಿತಿಯನ್ನು ರೂಪಿಸುವ ಕ್ರಾಂತಿಕಾರಿ ಉತ್ಪನ್ನ

ಕೃಷಿಯಲ್ಲಿ, ದಕ್ಷತೆ ಮತ್ತು ಉತ್ಪಾದಕತೆ ಯಾವಾಗಲೂ ಮುಖ್ಯವಾಗಿರುತ್ತದೆ. ಈಗ ನಾವು ನಿಮಗೆ ನಿಮ್ಮ ನೀರಿನ ಸ್ಥಿತಿ, ನಿಮ್ಮ ಸಸ್ಯ ಸಂರಕ್ಷಣಾ ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಪರಿಣಾಮಕಾರಿತ್ವವನ್ನು ಹೆಚ್ಚಿಸುವ…

January 28, 2025

ಎಕ್ಸ್‌ಸ್ಕೇಲೆಂಟ್ : ಡ್ರಿಪ್ ಕ್ಲೀನಿಂಗ್ ಕಾರ್ಯವಿಧಾನದ ಮೂಲಕ ಬೆಳೆಗಳಿಗೆ ಸುರಕ್ಷಿತ ಪರಿಹಾರಗಳು

ಇತ್ತೀಚಿನ ಆಧುನಿಕ ಕೃಷಿಯಲ್ಲಿ ಸಮರ್ಥ ನೀರಿನ ನಿರ್ವಹಣೆ ಮಾಡುವುದು ನಿರ್ಣಾಯಕವಾಗಿದೆ ಮತ್ತು ಹನಿ ನೀರಾವರಿ ಪದ್ದತಿಯು  ನೇರವಾಗಿ ಬೇರುಗಳ ವಲಯವನ್ನು ಗುರಿಯಾಗಿಸಿಕೊಂಡು ಸಸ್ಯಗಳಿಗೆ ನೀರನ್ನು ತಲುಪಿಸುವ ವಿಧಾನವನ್ನು…

January 28, 2025

ಬಯೋಕ್ಯುಲಮ್ AW: ಬೆಳೆ ಸುಸ್ಥಿರತೆಗಾಗಿ ಬಳಸಲು ಸಿದ್ಧವಾಗಿರುವ ಡಿಕಂಪೋಸರ್

ಸುಸ್ಥಿರ ಕೃಷಿ ಪದ್ದತಿಯಲ್ಲಿ ಸರಳವಾದ ಆದರೆ ಆಳವಾದ ವಿಷಯವೇನೆಂದರೆ ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸುವುದು. ಸಾವಯವ ಕೃಷಿ ತ್ಯಾಜ್ಯವು ನಮಗೆ ಹೊರೆಯಾಗಿರದೆ ಮಣ್ಣನ್ನು ಸಮೃದ್ಧಗೊಳಿಸುವ, ಸಸ್ಯಗಳನ್ನು ಪೋಷಿಸುವ ಮತ್ತು…

January 28, 2025

ಎಪಿಸೆಲ್: ಸುಸ್ಥಿರ ಕೃಷಿಗಾಗಿ ನಿಮ್ಮ ಬೆಳೆಗಳ ಸಂಪೂರ್ಣ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ

ಇತ್ತೀಚೆಗೆ ಬದಲಾಗುತ್ತಿರುವ ಕೃಷಿ ಭೂದೃಶ್ಯದ ಕಾರಣವಾಗಿ, ಸಮರ್ಥನೀಯ ಮತ್ತು ಸಮರ್ಥ ಕೃಷಿ ವಿಧಾನಗಳನ್ನು ಕಂಡುಹಿಡಿಯುವುದು ನಿರ್ಣಾಯಕವಾಗಿದೆ. ಅದಕ್ಕಾಗಿಯೇ ಪರಿಚಯಿಸುತ್ತಿದ್ದೇವೆ, ಎಪಿಸೆಲ್! ಎಕ್ಸೆಲ್ ಇಂಡಸ್ಟ್ರೀಸ್‌ ರವರ ಈ ನವೀನ…

January 28, 2025

ಸೆಲ್ ಜೆಲ್‌ನೊಂದಿಗೆ ಕೃಷಿ ದಕ್ಷತೆಯನ್ನು ಹೆಚ್ಚಿಸುವುದು: ನೀರಿನ ಕಂಡೀಷನಿಂಗ್ ಮತ್ತು pH ಸಮತೋಲನ ಮಾಡಲು ಸಲಹೆಗಳು

ನೀರು ಕೃಷಿಯಲ್ಲಿ ಮೂಲಭೂತ ಸಂಪನ್ಮೂಲವಾಗಿದ್ದು, ಬೆಳೆಗಳ ವೃದ್ಧಿಗಾಗಿ ಅಗತ್ಯ ಪೋಷಕಾಂಶಗಳ ಮತ್ತು ಬೆಳೆ ರಕ್ಷಣೆಗೆ ಅಗತ್ಯವಾದ ರಾಸಾಯನಿಕಗಳನ್ನು ಸಾಗಿಸುವಲ್ಲಿ ವಾಹಕವಾಗಿ ಕಾರ್ಯನಿರ್ವಹಿಸುತ್ತದೆ . ಆದಾಗ್ಯೂ, ಕಳೆನಾಶಕಗಳು, ಕೀಟನಾಶಕಗಳು,…

January 28, 2025

ಎಕ್ಸ್‌ಸ್ಕೇಲೆಂಟ್: ಹನಿ ನೀರಾವರಿ ವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ಸುರಕ್ಷಿತ ಮತ್ತು ಪರಿಣಾಮಕಾರಿ ಪರಿಹಾರ

ಹನಿ ನೀರಾವರಿ ವ್ಯವಸ್ಥೆ ಆಧುನಿಕ ಕೃಷಿಯ ಅತ್ಯಗತ್ಯ ಅಂಶವಾಗಿದೆ. ಇದು ಸಸ್ಯಗಳ ಬೇರುಗಳಿಗೆ ನೇರವಾಗಿ ನೀರನ್ನು ತಲುಪಿಸುವ ಅತ್ಯಂತ ಪರಿಣಾಮಕಾರಿ ವಿಧಾನವಾಗಿದೆ. ಈ ವಿಧಾನವು ನೀರನ್ನು ಸಂರಕ್ಷಿಸುವುದು…

January 28, 2025