News

ರೈತರ ಉತ್ತಮ ಭವಿಷ್ಯವನ್ನು ರೂಪಿಸುವುದು: ಉನ್ನತ ಗುಣಮಟ್ಟದ ಕೃಷಿಗಾಗಿ ಭಾರತದ ಇನೋವೇಟಿವ್ ಟ್ರೇಸಬಿಲಿಟಿ ಸಿಸ್ಟಮ್

ಸೀಡ್ ಟ್ರೇಸಬಿಲಿಟಿ ಸಿಸ್ಟಮ್ ಎಂಬುವುದು ರೈತರಿಗೆ ಉತ್ತಮ ಗುಣಮಟ್ಟದ ಬೀಜಗಳು/ಸಸಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಬೀಜ ವ್ಯಾಪಾರದಲ್ಲಿ ಮೋಸವನ್ನು ತಡೆಯವ ನಿಟ್ಟಿನಲ್ಲಿ ಮಾನ್ಯಶ್ರೀ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ಪ್ರಾರಂಭಿಸಲಿರುವ ಹೊಸ ಉಪಕ್ರಮವಾಗಿದೆ. ಸದರಿ ಉಪಕ್ರಮವು ರೈತರಿಗೆ ಹಾಗೂ ಬೀಜಗಳ ವಲಯದಲ್ಲಿ  ಮಧ್ಯಸ್ಥರಿಗೆ ಉಪಕಾರಿಯಾಗಲು ನಿರೀಕ್ಷಿಸಲಾಗಿದೆ.

ಅವಲೋಕನ

ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಶೀಘ್ರದಲ್ಲೇ ಸರ್ಕಾರವು ಸೀಡ್ ಟ್ರೇಸಬಿಲಿಟಿ ಸಿಸ್ಟಮ್ ಅನ್ನು ಪ್ರಾರಂಭಿಸಲಿದೆ ಎಂದು ಭಾರತದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ರವರು ಘೋಷಿಸಿದ್ದಾರೆ.  ಸದರಿ ವ್ಯವಸ್ಥೆಯಿಂದ ಬೀಜ ವ್ಯಾಪಾರ ಕ್ಷೇತ್ರದಲ್ಲಿ ಮೋಸಗಾರರನ್ನು ತಡೆಯುವ ನಿಟ್ಟಿನಲ್ಲಿ ಹಾಗೂ ರೈತರಿಗೆ ಮತ್ತು ಬಿತ್ತನೆ ಬೀಜಗಳ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ರೈತರಿಗೆ ಪ್ರಯೋಜನವನ್ನು ನೀಡುತ್ತದೆ. ಶ್ರೀಮಾನ್ ತೋಮರ್ ರವರು ಎಣ್ಣೆಕಾಳುಗಳು ಮತ್ತು ಹತ್ತಿ ಬೆಳೆಗಳ ಕ್ಷೇತ್ರದಲ್ಲಿ ಭಾರತವನ್ನು ಸದರಿ ಸ್ವಾವಲಂಬಿಯಾಗಿಸುವಲ್ಲಿ ಬೀಜೊತ್ಪಾದನೆಯ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು. ಅವರು ವಿಜ್ಞಾನಿಗಳ ಕೊಡುಗೆಯನ್ನು ಪ್ರಶಂಶಿಸಿದರು ಅವರು ವಿಜ್ಞಾನಿಗಳ ಕೊಡುಗೆಯನ್ನು ಪ್ರಶಂಶಿಸಿದರು ನಂತರ  ನವದೆಹಲಿಯಲ್ಲಿ ನ್ಯಾಷನಲ್ ಸೀಡ್ ಅಸೋಸಿಯೇಷನ್ ​​​​ಆಫ್ ಇಂಡಿಯಾ,ಆಯೋಜಿಸಿದ್ದ ದಿ ಇಂಡಿಯನ್ ಸೀಡ್ ಕಾಂಗ್ರೆಸ್ ನಲ್ಲಿ “ಜಾಗತಿಕ ಏಕತೆಗಾಗಿ ಬೀಜಗಳು( ಸೀಡ್ಸ್ ಫರ್ ಗ್ಲೋಬಲ್ ಯೂನಿಟಿ) ” ಎಂಬ ಮಾಹಿತಿಯನ್ನು  ಅನಾವರಣಗೊಳಿಸಿದರು. ಪರಸ್ಪರ ನಂಬಿಕೆಯ ವಾತಾವರಣವನ್ನು ಸೃಷ್ಟಿಸುವ ಸರ್ಕಾರದ ದೃಷ್ಟಿಕೋನವು ದೇಶದ ವ್ಯಾಪಾರ ಮತ್ತು ಉದ್ಯಮ ಕ್ಷೇತ್ರವನ್ನು ಬಲಪಡಿಸಲು ಸಹಾಯ ಮಾಡಲಿದೆ.

ರೈತರಿಗೆ ಆಗುವ ಪ್ರಯೋಜನಗಳು:

ಸೀಡ್ ಟ್ರೇಸಬಿಲಿಟಿ ಸಿಸ್ಟಮ್, ರೈತರಿಗೆ ಉತ್ತಮ ಗುಣಮಟ್ಟದ ಬೀಜಗಳನ್ನು ಪಡೆಯುವಲ್ಲಿ ಸಹಾಯ ಮಾಡುತ್ತದೆ, ಇದು ಬೆಳೆಯ ಇಳುವರಿ ಮತ್ತು ಗುಣಮಟ್ಟವನ್ನು ಸುಧಾರಿಸುತ್ತದೆ. ಕಳಪೆ ಗುಣಮಟ್ಟದ ಬೀಜಗಳಿಂದಾಗಿ ಬೆಳೆ ವೈಫಲ್ಯದ ಅಪಾಯವನ್ನು ಕಡಿಮೆ ಮಾಡುವಲ್ಲಿ ಸಹಾಯ ಮಾಡುತ್ತದೆ. ಪ್ರಸ್ತುತ ಅವಕಾಶದಿಂದ ರೈತರಿಗೆ ತಮ್ಮ ಬೀಜಗಳ ಮೂಲವನ್ನು ತಿಳಿದುಕೊಳ್ಳಲು ಅನುವು ಮಾಡಿಕೊಡುತ್ತದೆ. ಸದರಿಯಿಂದ ಬೀಜ ವ್ಯಾಪಾರ ವಲಯದಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸಿ ವಂಚನೆಯನ್ನು ಕಡಿಮೆ ಮಾಡುತ್ತದೆ.

ಪ್ರಮುಖ ಅಂಶಗಳು

  1. ಸೀಡ್ ಟ್ರೇಸಬಿಲಿಟಿ ಸಿಸ್ಟಮ್ ಎಂಬ ಕಾರ್ಯಕ್ರಮವು ರೈತರಿಗೆ ಉತ್ತಮ ಗುಣಮಟ್ಟದ ಬೀಜಗಳ ಲಭ್ಯತೆಯನ್ನು ಖಾತರಿಪಡಿಸಿಕೊಳ್ಳಲು ಮತ್ತು ಬೀಜ ವ್ಯಾಪಾರ ವಲಯದಲ್ಲಿ ವಂಚನೆಯನ್ನು ತಡೆಯಲು ಭಾರತ ಸರ್ಕಾರವು ಪ್ರಾರಂಭಿಸಿರುವ ಒಂದು ಹೊಸ ಉಪಕ್ರಮವಾಗಿದೆ.
  2. ಪ್ರಸ್ತುತ ವ್ಯವಸ್ಥೆಯು ರೈತರಿಗೆ ಬೀಜಗಳ ಮೂಲವನ್ನು ತಿಳಿದುಕೊಳ್ಳಲು ಅನುವು ಮಾಡಿಕೊಡುತ್ತದೆ, ಇದರಿಂದ ಬೀಜ ವ್ಯಾಪಾರ ವಲಯದಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸಿಕೊಂಡು, ವಂಚನೆಯನ್ನು ತಡೆಯುವಲ್ಲಿ ಉಪಕಾರಿಯಾಗಲಿದೆ.
  3. ಸೀಡ್ ಟ್ರೇಸಬಿಲಿಟಿ ಸಿಸ್ಟಮ್ ನಿಂದ ಬೆಳೆ ಇಳುವರಿ ಮತ್ತು ಗುಣಮಟ್ಟವನ್ನು ಸುಧಾರಿಸುವ ಮೂಲಕ ರೈತರಿಗೆ ಪ್ರಯೋಜನವನ್ನು ನೀಡಲಿದೆ ಹಾಗೆಯೇ ಕಳಪೆ ಗುಣಮಟ್ಟದ ಬೀಜಗಳಿಂದಾಗಿ ಬೆಳೆಯ ವೈಫಲ್ಯದ ಅಪಾಯವನ್ನು ಕಡತಗೊಳಿಸಬಹುದು.
  4. ಪ್ರಸಕ್ತ ಸರ್ಕಾರವು ವ್ಯಾಪಾರ ಮತ್ತು ಉದ್ಯಮ ವಲಯ ಸೇರಿದಂತೆ ದೇಶದ ಎಲ್ಲಾ ವರ್ಗಗಳ ಹಿತಾದೃಷ್ಟಿಯಿಂದ ಕಾನೂನು ಮತ್ತು ನೀತಿ ಸುಧಾರಣೆಗಳಿಗೆ ತನ್ನ ಬದ್ಧತೆಯನ್ನು ತೋರಿದೆ.

ತೀರ್ಮಾನ

ಸೀಡ್ ಟ್ರೇಸಬಿಲಿಟಿ ಸಿಸ್ಟಮ್, ಭಾರತ ಸರ್ಕಾರದ ಒಂದು ಮಹತ್ವದ ಉಪಕ್ರಮವಾಗಿದ್ದು, ಬಿತ್ತನೆ ಬೀಜಗಳ ಕ್ಷೇತ್ರದಲ್ಲಿ ರೈತರಿಗೆ ಮತ್ತು ಮಧ್ಯಸ್ಥಗಾರರಿಗೆ ಪ್ರಯೋಜನವನ್ನು ನೀಡುತ್ತದೆ. ಇದು ಬೆಳೆ ಇಳುವರಿ ಮತ್ತು ಗುಣಮಟ್ಟವನ್ನು ಸುಧಾರಿಸಲಿದ್ದು, ಬೆಳೆ ವೈಫಲ್ಯದ ಅಪಾಯವನ್ನು ಕಡಿಮೆ ಮಾಡುತ್ತದೆ, ಮುಂದೂವರಿದು ಬೀಜ ವ್ಯಾಪರದಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ಜೊತೆಗೆ ಬೀಜಗಳ ವಲಯದಲ್ಲಿ ಉತ್ತಮ ಕಾರ್ಯನಿರ್ವಹಿಸುವ ಜನರನ್ನು ರಕ್ಷಿಸುತ್ತದೆ. ಸದರಿ ವ್ಯವಸ್ಥೆಯು ಕೃಷಿ ಕ್ಷೇತ್ರದ ಬಗ್ಗೆ ಸರ್ಕಾರದ ಬದ್ಧತೆಯನ್ನು ಹಾಗೆ ಕೃಷಿಕರ ಏಳಿಗೆಯನ್ನು ಖಾತರಿಪಡಿಸಿಕೊಳ್ಳಲು ಪ್ರಯತ್ನಗಳಿಗೆ ನಾಂದಿಯಾಗಿದೆ.

 

Recent Posts

ಸೆಲ್ ಜೆಲ್: ಆಧುನಿಕ ಕೃಷಿಗಾಗಿ ನೀರಿನ ಉತ್ತಮ ಸ್ಥಿತಿಯನ್ನು ರೂಪಿಸುವ ಕ್ರಾಂತಿಕಾರಿ ಉತ್ಪನ್ನ

ಕೃಷಿಯಲ್ಲಿ, ದಕ್ಷತೆ ಮತ್ತು ಉತ್ಪಾದಕತೆ ಯಾವಾಗಲೂ ಮುಖ್ಯವಾಗಿರುತ್ತದೆ. ಈಗ ನಾವು ನಿಮಗೆ ನಿಮ್ಮ ನೀರಿನ ಸ್ಥಿತಿ, ನಿಮ್ಮ ಸಸ್ಯ ಸಂರಕ್ಷಣಾ ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಪರಿಣಾಮಕಾರಿತ್ವವನ್ನು ಹೆಚ್ಚಿಸುವ…

January 28, 2025

ಎಕ್ಸ್‌ಸ್ಕೇಲೆಂಟ್ : ಡ್ರಿಪ್ ಕ್ಲೀನಿಂಗ್ ಕಾರ್ಯವಿಧಾನದ ಮೂಲಕ ಬೆಳೆಗಳಿಗೆ ಸುರಕ್ಷಿತ ಪರಿಹಾರಗಳು

ಇತ್ತೀಚಿನ ಆಧುನಿಕ ಕೃಷಿಯಲ್ಲಿ ಸಮರ್ಥ ನೀರಿನ ನಿರ್ವಹಣೆ ಮಾಡುವುದು ನಿರ್ಣಾಯಕವಾಗಿದೆ ಮತ್ತು ಹನಿ ನೀರಾವರಿ ಪದ್ದತಿಯು  ನೇರವಾಗಿ ಬೇರುಗಳ ವಲಯವನ್ನು ಗುರಿಯಾಗಿಸಿಕೊಂಡು ಸಸ್ಯಗಳಿಗೆ ನೀರನ್ನು ತಲುಪಿಸುವ ವಿಧಾನವನ್ನು…

January 28, 2025

ಬಯೋಕ್ಯುಲಮ್ AW: ಬೆಳೆ ಸುಸ್ಥಿರತೆಗಾಗಿ ಬಳಸಲು ಸಿದ್ಧವಾಗಿರುವ ಡಿಕಂಪೋಸರ್

ಸುಸ್ಥಿರ ಕೃಷಿ ಪದ್ದತಿಯಲ್ಲಿ ಸರಳವಾದ ಆದರೆ ಆಳವಾದ ವಿಷಯವೇನೆಂದರೆ ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸುವುದು. ಸಾವಯವ ಕೃಷಿ ತ್ಯಾಜ್ಯವು ನಮಗೆ ಹೊರೆಯಾಗಿರದೆ ಮಣ್ಣನ್ನು ಸಮೃದ್ಧಗೊಳಿಸುವ, ಸಸ್ಯಗಳನ್ನು ಪೋಷಿಸುವ ಮತ್ತು…

January 28, 2025

ಎಪಿಸೆಲ್: ಸುಸ್ಥಿರ ಕೃಷಿಗಾಗಿ ನಿಮ್ಮ ಬೆಳೆಗಳ ಸಂಪೂರ್ಣ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ

ಇತ್ತೀಚೆಗೆ ಬದಲಾಗುತ್ತಿರುವ ಕೃಷಿ ಭೂದೃಶ್ಯದ ಕಾರಣವಾಗಿ, ಸಮರ್ಥನೀಯ ಮತ್ತು ಸಮರ್ಥ ಕೃಷಿ ವಿಧಾನಗಳನ್ನು ಕಂಡುಹಿಡಿಯುವುದು ನಿರ್ಣಾಯಕವಾಗಿದೆ. ಅದಕ್ಕಾಗಿಯೇ ಪರಿಚಯಿಸುತ್ತಿದ್ದೇವೆ, ಎಪಿಸೆಲ್! ಎಕ್ಸೆಲ್ ಇಂಡಸ್ಟ್ರೀಸ್‌ ರವರ ಈ ನವೀನ…

January 28, 2025

ಸೆಲ್ ಜೆಲ್‌ನೊಂದಿಗೆ ಕೃಷಿ ದಕ್ಷತೆಯನ್ನು ಹೆಚ್ಚಿಸುವುದು: ನೀರಿನ ಕಂಡೀಷನಿಂಗ್ ಮತ್ತು pH ಸಮತೋಲನ ಮಾಡಲು ಸಲಹೆಗಳು

ನೀರು ಕೃಷಿಯಲ್ಲಿ ಮೂಲಭೂತ ಸಂಪನ್ಮೂಲವಾಗಿದ್ದು, ಬೆಳೆಗಳ ವೃದ್ಧಿಗಾಗಿ ಅಗತ್ಯ ಪೋಷಕಾಂಶಗಳ ಮತ್ತು ಬೆಳೆ ರಕ್ಷಣೆಗೆ ಅಗತ್ಯವಾದ ರಾಸಾಯನಿಕಗಳನ್ನು ಸಾಗಿಸುವಲ್ಲಿ ವಾಹಕವಾಗಿ ಕಾರ್ಯನಿರ್ವಹಿಸುತ್ತದೆ . ಆದಾಗ್ಯೂ, ಕಳೆನಾಶಕಗಳು, ಕೀಟನಾಶಕಗಳು,…

January 28, 2025

ಎಕ್ಸ್‌ಸ್ಕೇಲೆಂಟ್: ಹನಿ ನೀರಾವರಿ ವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ಸುರಕ್ಷಿತ ಮತ್ತು ಪರಿಣಾಮಕಾರಿ ಪರಿಹಾರ

ಹನಿ ನೀರಾವರಿ ವ್ಯವಸ್ಥೆ ಆಧುನಿಕ ಕೃಷಿಯ ಅತ್ಯಗತ್ಯ ಅಂಶವಾಗಿದೆ. ಇದು ಸಸ್ಯಗಳ ಬೇರುಗಳಿಗೆ ನೇರವಾಗಿ ನೀರನ್ನು ತಲುಪಿಸುವ ಅತ್ಯಂತ ಪರಿಣಾಮಕಾರಿ ವಿಧಾನವಾಗಿದೆ. ಈ ವಿಧಾನವು ನೀರನ್ನು ಸಂರಕ್ಷಿಸುವುದು…

January 28, 2025