News

ರೈತರ ಬಾಳಲ್ಲಿ ಚಿಗುರು ಮೂಡಿಸಿದ ಆಧುನಿಕ ಕೃಷಿ ತಂತ್ರಜ್ಞಾನ: SMAM ಯೋಜನೆಯ ಉಪಕ್ರಮ

ಪರಿಚಯ

         ವಿವಿಧ ಬೆಳೆಗಳು, ಭೌಗೋಳಿಕ ಪರಿಸ್ಥಿತಿಗಳು ಮತ್ತು ಇತರ ಅಂಶಗಳನ್ನು ಅವಲಂಬಿಸಿ ಭಾರತದ ಕೃಷಿಯಲ್ಲಿ ಯಾಂತ್ರೀಕರಣ ಬದಲಾಗುತ್ತದೆ. ಸಣ್ಣ ರೈತರ ಹಿಡುವಳಿಗೆ ಕೃಷಿ ಉಪಕರಣಗಳ ಲಭ್ಯತೆಯನ್ನು ಹೆಚ್ಚಿಸಲು ಮತ್ತು ಕೃಷಿ ಯಂತ್ರಗಳ ಖರೀದಿಗೆ ಹಣಕಾಸಿನ ನೆರವು ನೀಡಲು ಕೇಂದ್ರ ಸರ್ಕಾರ ಪ್ರಾಯೋಜಿತ ಕಾರ್ಯಕ್ರಮವಾದ ಸಬ್ಮಿಷನ್ ಆನ್ ಅಗ್ರಿಕಲ್ಚರಲ್ ಮೆಕನೈಸೇಶನ್ (SMAM)ಯೋಜನೆಯ ಮೂಲಕ ಕೃಷಿ ಯಾಂತ್ರೀಕರಣವನ್ನು ಉತ್ತೇಜಿಸಿದೆ. ಸದರಿ ಯೋಜನೆಯಡಿಯಲ್ಲಿ 40,900 ಕಸ್ಟಮ್ ನೇಮಕಾತಿ ಕೇಂದ್ರಗಳು/ಹೈಟೆಕ್ ಹಬ್ಗಳು/ಕೃಷಿ ಯಂತ್ರಗಳ ಬ್ಯಾಂಕ್ಗಳನ್ನು ಸ್ಥಾಪಿಸಲಾಗಿದೆ.

ಅವಲೋಕನ

            ಕೃಷಿಯಲ್ಲಿ ದಕ್ಷತೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ಮುಖ್ಯ ಧ್ಯೇಯವನ್ನಿಟ್ಟುಕೊಂಡು ಕೃಷಿಯಲ್ಲಿ ಯಂತ್ರೋಪಕರಣಗಳು ಮತ್ತು ಸಲಕರಣೆಗಳನ್ನು  ಬಳಸುವಂತೆ ಸೂಚಿಸುತ್ತದೆ. ಕೃಷಿ ಯಾಂತ್ರೀಕರಣವನ್ನು ಉತ್ತೇಜಿಸಲು ಭಾರತ ಸರ್ಕಾರವು ಅನುವು ಮಾಡಿದೆ. ಸಬ್ಮಿಷನ್ ಆನ್ ಅಗ್ರಿಕಲ್ಚರಲ್ ಮೆಕನೈಸೇಶನ್ ಯೋಜನೆಯು ರೈತರಿಗೆ, ಗ್ರಾಮೀಣ ಯುವಕರಿಗೆ ಹಾಗೂ ರೈತ ಉತ್ಪಾದಕ ಸಂಸ್ಥೆಗಳಿಗೆ ಕೃಷಿ ಯಂತ್ರೋಪಕರಣಗಳ ಖರೀದಿಗೆ ಹಾಗು ಕಸ್ಟಮ್ ಬಾಡಿಗೆ ಕೇಂದ್ರಗಳ ಸ್ಥಾಪನೆಗೆ ಹಣಕಾಸಿನ ನೆರವು ನೀಡುತ್ತದೆ. ರೈತರಿಗೆ, ಕೃಷಿ ಯಂತ್ರೋಪಕರಣಗಳನ್ನು ಖರೀದಿಸಲು ಸಾಧ್ಯವಾಗದ ಕಾರಣ ಸದರಿ ಕಸ್ಟಮ್ ಬಾಡಿಗೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ, ಇವು ರೈತರು ಕೃಷಿ ಉಪಕರಣಗಳನ್ನು ಬಾಡಿಗೆಗೆ ಪಡೆಯುವ ಸ್ಥಳವಾಗಿದೆ. ರೈತರ  ಆರ್ಥಿಕ ಪರಿಸ್ಥಿತಿಯನ್ನು ಹಾಗೂ ಜಮೀನಿನ ಗಾತ್ರವನ್ನು ಪರಿಗಣಿಸದೆ, ಕೃಷಿ ಉಪಕರಣಗಳ ಲಭ್ಯತೆಯನ್ನು ಹೆಚ್ಚಿಸುವುದು ಸದರಿ ಯೋಜನೆಯ ಮುಖ್ಯ ಗುರಿಸದರಿ ಕಾರ್ಯಕ್ರಮವು ಇಳುವರಿ ಹಾಗೂ ಕೃಷಿ ಕ್ಷಮತೆಯನ್ನು ಹೆಚ್ಚಿಸುವುದರ ಜೊತೆಗ ರೈತರಿಗೆ ಹಾಗೂ ಭಾರತೀಯ ಆರ್ಥಿಕತೆಯನ್ನು ಅಧಿಕ ಗೊಳಿಸಲು ನೆರವಾಗಿದೆ.

         ಭಾರತದೇಶದ ರೈತರು ಸಬ್-ಮಿಷನ್ ಆನ್ ಅಗ್ರಿಕಲ್ಚರಲ್ ಮೆಕನೈಸೇಶನ್ ಕಾರ್ಯಕ್ರಮದ ಪ್ರಾಥಮಿಕ ಫಲಾನುಭವಿಗಳಾಗಿದ್ದಾರೆ. ರೈತರ  ಆರ್ಥಿಕ ಪರಿಸ್ಥಿತಿಯನ್ನು ಹಾಗೂ ಜಮೀನಿನ ಪರಿಮಾಣವನ್ನು ಪರಿಗಣಿಸದೆ, ಆಧುನಿಕ ಕೃಷಿ ಉಪಕರಣಗಳು ಮತ್ತು ತಂತ್ರಜ್ಞಾನವನ್ನು ಅಳವಡಿಸುವಂತೆ ಸದರಿ ಯೋಜನೆಯನ್ನು ವಿನ್ಯಾಸಗೊಳಿಸಲಾಗಿದೆ. ಸದರಿ ಯೋಜನೆಯು ಹಣಕಾಸಿನ ನೆರವು ನೀಡುವ ಮೂಲಕ, ರೈತರಿಗೆ ಅಗತ್ಯವಿರುವ ಉಪಕರಣಗಳನ್ನು ಖರೀದಿಸಲು ಅನುವು ಮಾಡಿದ್ದು ತಮ್ಮ ಬೆಳೆ ಉತ್ಪಾದಕತೆಯನ್ನು ಹೆಚ್ಚಿಸಲು ನಾಂದಿಯಾಗಿದೆ. ಮುಂದೆ,  ಕಸ್ಟಮ್ ನೇಮಕಾತಿ ಕೇಂದ್ರಗಳನ್ನು ಸ್ಥಾಪಿಸಿದ್ದು, ರೈತರಿಗೆ ಬಾಡಿಗೆ ಆಧಾರಿತ ಕೃಷಿ ಉಪಕರಣಗಳನ್ನು ಪಡೆಯಲು ನೆರವಾಗಿದೆ. ಸದರಿಯು ರೈತರಿಗೆ ಆಧುನಿಕ ಉಪಕರಣ ಮತ್ತು ತಂತ್ರಜ್ಞಾನಕ್ಕೆ ಮಾರ್ಗ ನೀಡಿ ಇಳುವರಿ ಹಾಗೂ ಕೃಷಿ ದಕ್ಷತೆಯನ್ನು ಸುಧಾರಿಸಲು ಸಹಾಯ ಮಾಡಿದೆ. ಕಾರ್ಯಕ್ರಮದಿಂದ, ಭಾರತದ ರೈತರು ಕೃಷಿಯಲ್ಲಿನ ಇತ್ತೀಚಿನ ಆಧುನಿಕತೆಯ ಲಾಭವನ್ನು ಪಡೆಯಬಹುದು, ಸದರಿಯು ರೈತ ಸಮುದಾಯಕ್ಕೆ ಉತ್ತಮ ಭವಿಷ್ಯವನ್ನು ರೂಪಿಸಿದೆ.

ಪ್ರಮುಖ ಅಂಶಗಳು

  •     ಸಬ್-ಮಿಷನ್ ಆನ್ ಅಗ್ರಿಕಲ್ಚರಲ್ ಮೆಕನೈಸೇಶನ್ (SMAM)ಯೋಜನೆಯು ಭಾರತದಲ್ಲಿ ಕೃಷಿ ಯಾಂತ್ರೀಕರಣವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.
  •     ಸದರಿ ಯೋಜನೆಯು ರೈತರಿಗೆ, ಗ್ರಾಮೀಣ ಯುವಕರಿಗೆ ಹಾಗೂ ರೈತ ಉತ್ಪಾದಕ ಸಂಸ್ಥೆಗಳಿಗೆ  ಕೃಷಿ ಯಂತ್ರೋಪಕರಣಗಳ ಖರೀದಿಗೆ ಹಾಗು ಕಸ್ಟಮ್ ಬಾಡಿಗೆ ಕೇಂದ್ರಗಳ ಸ್ಥಾಪನೆಗೆ ಹಣಕಾಸಿನ ನೆರವು ನೀಡುತ್ತದೆ.
  •     ಕೃಷಿ ಯಂತ್ರೋಪಕರಣಗಳ ಖರೀದಿಸಲು ಸಾಧ್ಯವಾಗದ ಕಾರಣ ಕಸ್ಟಮ್ ಬಾಡಿಗೆ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಇವು ರೈತರು ಕೃಷಿ ಉಪಕರಣಗಳನ್ನು ಬಾಡಿಗೆಗೆ ಪಡೆಯುವ ಸ್ಥಳವಾಗಿದೆ
  •     ರೈತರ  ಆರ್ಥಿಕ ಪರಿಸ್ಥಿತಿಯನ್ನು ಹಾಗೂ ಜಮೀನಿನ ಪರಿಮಾಣವನ್ನು ಪರಿಗಣಿಸದೆ, ಕೃಷಿ ಉಪಕರಣಗಳ ಲಭ್ಯತೆಯನ್ನು ಹೆಚ್ಚಿಸುವುದು ಸದರಿ ಯೋಜನೆಯ ಮುಖ್ಯ ಗುರಿಯಾಗಿದೆ.
  •     ಭಾರತದಾದ್ಯಂತ ಸುಮಾರು 40,000 ಕಸ್ಟಮ್ ಬಾಡಿಗೆ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು,  ರೈತರಿಗೆ ಆಧುನಿಕ ಉಪಕರಣಗಳ  ಸದುಪಯೋಗ ಮತ್ತು ತಂತ್ರಜ್ಞಾನಕ್ಕೆ ನಾಂದಿಯಾಗಿದೆ.
  •     ಸದರಿ ಯೋಜನೆಯ ಮುಖಾಂತರ ರೈತರು ಕೃಷಿಯಲ್ಲಿನ ಇತ್ತೀಚಿನ ಆಧುನಿಕತೆಯ ಲಾಭವನ್ನು ಪಡೆಯಬಹುದು, ಜೊತೆಗೆ ಸದರಿಯು ಬೆಳೆ ಇಳುವರಿ  ಹಾಗೂ ಕೃಷಿ ಕ್ಷಮತೆಯನ್ನು ಹೆಚ್ಚಿಸಿ ರೈತ ಸಮುದಾಯಕ್ಕೆ ಉತ್ತಮ ಭವಿಷ್ಯವನ್ನು ರೂಪಿಸಿದೆ.

ತೀರ್ಮಾನ:

         ಸಬ್-ಮಿಷನ್ ಆನ್ ಅಗ್ರಿಕಲ್ಚರಲ್ ಮೆಕನೈಸೇಶನ್ (SMAM) ಕಾರ್ಯಕ್ರಮವು, ಭಾರತದ ರೈತರಿಗೆ ಅಮೂಲ್ಯವಾದ ಸಂಪನ್ಮೂಲವಾಗಿದೆ. ಇದರಿಂದ ರೈತರಿಗೆ ಆಧುನಿಕ ಉಪಕರಣಗಳು ಮತ್ತು ತಂತ್ರಜ್ಞಾನದ ಲಾಭವನ್ನು ಪಡೆಯಲು ಸಹಾಯ ಮಾಡುತ್ತದೆ, ಜೊತೆಗೆ ದಕ್ಷತೆ ಮತ್ತು ಉತ್ಪಾದಕತೆಯನ್ನು ಸುಧಾರಿಸಲು ಅನುವು ಮಾಡಿಕೊಡುತ್ತದೆ. ಹಣಕಾಸಿನ ನೆರವು ನೀಡುವ ಮೂಲಕ ಮತ್ತು ಕಸ್ಟಮ್ ಬಾಡಿಗೆ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ, ರೈತರ ಆರ್ಥಿಕ ಪರಿಸ್ಥಿತಿಯನ್ನು ಲೆಕ್ಕಿಸದೆ, ಆಧುನಿಕ ಕೃಷಿಯ ಪ್ರಯೋಜನವನ್ನು ಪಡೆಯಲು ಸಹಾಯ ಮಾಡುತ್ತದೆ. ಸದರಿ ಕಾರ್ಯಕ್ರಮವು ಸಣ್ಣ ಭೂ ಹಿಡುವಳಿದಾರರಿಗೆ ಲಾಭದಾಯಕವಾಗಲಿದೆ.  ಕಸ್ಟಮ್ ಬಾಡಿಗೆ ಕೇಂದ್ರಗಳ ಸ್ಥಾಪನೆಯು ರೈತರಿಗೆ ಅನುಗುಣವಾಗಿ ಅಗತ್ಯವಿರುವ ಉಪಕರಣಗಳನ್ನು ಪಡೆಯಲು ನೆರವಾಗಿದೆ.. ಸದರಿ ಕಾರ್ಯಕ್ರಮದಿಂದ, ಭಾರತದ ರೈತರು ಆಧುನಿಕ ಕೃಷಿಯ ಲಾಭವನ್ನು ಪಡೆದುಕೊಳ್ಳಲು  ನೆರವಾಗಿದ್ದು, ಹೆಚ್ಚು ಸಮೃದ್ಧವಾದ ಭವಿಷ್ಯವನ್ನು ಸೃಷ್ಟಿಸಿದೆ.

Recent Posts

ಸೆಲ್ ಜೆಲ್: ಆಧುನಿಕ ಕೃಷಿಗಾಗಿ ನೀರಿನ ಉತ್ತಮ ಸ್ಥಿತಿಯನ್ನು ರೂಪಿಸುವ ಕ್ರಾಂತಿಕಾರಿ ಉತ್ಪನ್ನ

ಕೃಷಿಯಲ್ಲಿ, ದಕ್ಷತೆ ಮತ್ತು ಉತ್ಪಾದಕತೆ ಯಾವಾಗಲೂ ಮುಖ್ಯವಾಗಿರುತ್ತದೆ. ಈಗ ನಾವು ನಿಮಗೆ ನಿಮ್ಮ ನೀರಿನ ಸ್ಥಿತಿ, ನಿಮ್ಮ ಸಸ್ಯ ಸಂರಕ್ಷಣಾ ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಪರಿಣಾಮಕಾರಿತ್ವವನ್ನು ಹೆಚ್ಚಿಸುವ…

January 28, 2025

ಎಕ್ಸ್‌ಸ್ಕೇಲೆಂಟ್ : ಡ್ರಿಪ್ ಕ್ಲೀನಿಂಗ್ ಕಾರ್ಯವಿಧಾನದ ಮೂಲಕ ಬೆಳೆಗಳಿಗೆ ಸುರಕ್ಷಿತ ಪರಿಹಾರಗಳು

ಇತ್ತೀಚಿನ ಆಧುನಿಕ ಕೃಷಿಯಲ್ಲಿ ಸಮರ್ಥ ನೀರಿನ ನಿರ್ವಹಣೆ ಮಾಡುವುದು ನಿರ್ಣಾಯಕವಾಗಿದೆ ಮತ್ತು ಹನಿ ನೀರಾವರಿ ಪದ್ದತಿಯು  ನೇರವಾಗಿ ಬೇರುಗಳ ವಲಯವನ್ನು ಗುರಿಯಾಗಿಸಿಕೊಂಡು ಸಸ್ಯಗಳಿಗೆ ನೀರನ್ನು ತಲುಪಿಸುವ ವಿಧಾನವನ್ನು…

January 28, 2025

ಬಯೋಕ್ಯುಲಮ್ AW: ಬೆಳೆ ಸುಸ್ಥಿರತೆಗಾಗಿ ಬಳಸಲು ಸಿದ್ಧವಾಗಿರುವ ಡಿಕಂಪೋಸರ್

ಸುಸ್ಥಿರ ಕೃಷಿ ಪದ್ದತಿಯಲ್ಲಿ ಸರಳವಾದ ಆದರೆ ಆಳವಾದ ವಿಷಯವೇನೆಂದರೆ ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸುವುದು. ಸಾವಯವ ಕೃಷಿ ತ್ಯಾಜ್ಯವು ನಮಗೆ ಹೊರೆಯಾಗಿರದೆ ಮಣ್ಣನ್ನು ಸಮೃದ್ಧಗೊಳಿಸುವ, ಸಸ್ಯಗಳನ್ನು ಪೋಷಿಸುವ ಮತ್ತು…

January 28, 2025

ಎಪಿಸೆಲ್: ಸುಸ್ಥಿರ ಕೃಷಿಗಾಗಿ ನಿಮ್ಮ ಬೆಳೆಗಳ ಸಂಪೂರ್ಣ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ

ಇತ್ತೀಚೆಗೆ ಬದಲಾಗುತ್ತಿರುವ ಕೃಷಿ ಭೂದೃಶ್ಯದ ಕಾರಣವಾಗಿ, ಸಮರ್ಥನೀಯ ಮತ್ತು ಸಮರ್ಥ ಕೃಷಿ ವಿಧಾನಗಳನ್ನು ಕಂಡುಹಿಡಿಯುವುದು ನಿರ್ಣಾಯಕವಾಗಿದೆ. ಅದಕ್ಕಾಗಿಯೇ ಪರಿಚಯಿಸುತ್ತಿದ್ದೇವೆ, ಎಪಿಸೆಲ್! ಎಕ್ಸೆಲ್ ಇಂಡಸ್ಟ್ರೀಸ್‌ ರವರ ಈ ನವೀನ…

January 28, 2025

ಸೆಲ್ ಜೆಲ್‌ನೊಂದಿಗೆ ಕೃಷಿ ದಕ್ಷತೆಯನ್ನು ಹೆಚ್ಚಿಸುವುದು: ನೀರಿನ ಕಂಡೀಷನಿಂಗ್ ಮತ್ತು pH ಸಮತೋಲನ ಮಾಡಲು ಸಲಹೆಗಳು

ನೀರು ಕೃಷಿಯಲ್ಲಿ ಮೂಲಭೂತ ಸಂಪನ್ಮೂಲವಾಗಿದ್ದು, ಬೆಳೆಗಳ ವೃದ್ಧಿಗಾಗಿ ಅಗತ್ಯ ಪೋಷಕಾಂಶಗಳ ಮತ್ತು ಬೆಳೆ ರಕ್ಷಣೆಗೆ ಅಗತ್ಯವಾದ ರಾಸಾಯನಿಕಗಳನ್ನು ಸಾಗಿಸುವಲ್ಲಿ ವಾಹಕವಾಗಿ ಕಾರ್ಯನಿರ್ವಹಿಸುತ್ತದೆ . ಆದಾಗ್ಯೂ, ಕಳೆನಾಶಕಗಳು, ಕೀಟನಾಶಕಗಳು,…

January 28, 2025

ಎಕ್ಸ್‌ಸ್ಕೇಲೆಂಟ್: ಹನಿ ನೀರಾವರಿ ವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ಸುರಕ್ಷಿತ ಮತ್ತು ಪರಿಣಾಮಕಾರಿ ಪರಿಹಾರ

ಹನಿ ನೀರಾವರಿ ವ್ಯವಸ್ಥೆ ಆಧುನಿಕ ಕೃಷಿಯ ಅತ್ಯಗತ್ಯ ಅಂಶವಾಗಿದೆ. ಇದು ಸಸ್ಯಗಳ ಬೇರುಗಳಿಗೆ ನೇರವಾಗಿ ನೀರನ್ನು ತಲುಪಿಸುವ ಅತ್ಯಂತ ಪರಿಣಾಮಕಾರಿ ವಿಧಾನವಾಗಿದೆ. ಈ ವಿಧಾನವು ನೀರನ್ನು ಸಂರಕ್ಷಿಸುವುದು…

January 28, 2025